Skip to main content

Featured

ನೀವು ಜೀವಿಸುವ ಪದ್ಧತಿ ಹೇಗೇ

  ಪ್ರತಿಯೊಬ್ಬ ಮಹಿಳೆಯೂ ಅಸಭ್ಯ ಉಡುಗೆ ತೊಡುಗೆ, ಬಟ್ಟೆ ತೆಗೆಯುವಿಕೆ ಮತ್ತು ಪ್ರಲೋಭನೆಯನ್ನು ಪ್ರಚೋದಿಸುವ ಯಾವುದೇ ವಿಷಯದ ಬಗ್ಗೆ ಎಚ್ಚರದಿಂದಿರಬೇಕು, ಏಕೆಂದರೆ ಒಬ್ಬ ಮಹಿಳೆಯನ್ನು ಆರತ್ ಎಂದು ಪರಿಗಣಿಸಲಾಗುತ್ತದೆ ಮತ್ತು ಪುರುಷರು ಸ್ವಾಭಾವಿಕವಾಗಿ ಅವಳ ಕಡೆಗೆ ಆಕರ್ಷಿತರಾಗುತ್ತಾರೆ,  ಅವಳು ಅವರ ಕಡೆಗೆ ಆಕರ್ಷಿತರಾಗುತ್ತಾಳೆ. ಅಲ್ಲಾಹನು ತಾನು ರಕ್ಷಿಸುವವರನ್ನು ಮಾತ್ರ ರಕ್ಷಿಸುತ್ತಾನೆ ಮತ್ತು ಅವನು ಸಂರಕ್ಷಿಸುವವರನ್ನು ಮಾತ್ರ ಸಂರಕ್ಷಿಸುತ್ತಾನೆ. ಆದ್ದರಿಂದ, ಪುರುಷರು ಮತ್ತು ಮಹಿಳೆಯರು ಇಬ್ಬರೂ ಜಾಗರೂಕರಾಗಿರಬೇಕು. ಪುರುಷರು ತಮ್ಮ ನೋಟವನ್ನು ಕಡಿಮೆ ಮಾಡಬೇಕು, ಪುರುಷರೊಂದಿಗೆ ಏಕಾಂತತೆಯನ್ನು ತಪ್ಪಿಸಬೇಕು ಮತ್ತು ಪ್ರಲೋಭನೆಯ ಎಲ್ಲಾ ಕಾರಣಗಳ ಬಗ್ಗೆ ಎಚ್ಚರದಿಂದಿರಬೇಕು. ಅದೇ ರೀತಿ, ಮಹಿಳೆಯರು ಪುರುಷರೊಂದಿಗೆ ಏಕಾಂಗಿಯಾಗಿರುವುದು , ಸಾರ್ವಜನಿಕವಾಗಿ ತಮ್ಮ ಸೌಂದರ್ಯ ಮತ್ತು ಮೋಡಿಗಳನ್ನು ಪ್ರದರ್ಶಿಸುವುದು ಮತ್ತು ಸಂಬಂಧವಿಲ್ಲದ ಪುರುಷರ ಮುಂದೆ ತಮ್ಮನ್ನು ತಾವು ಬಹಿರಂಗಪಡಿಸುವಂತಹ ಪ್ರಲೋಭನೆಯ ಕಾರಣಗಳ ಬಗ್ಗೆ ಎಚ್ಚರದಿಂದಿರಬೇಕು. ಸರ್ವಶಕ್ತ ನಾದ ಅಲ್ಲಾಹನು ಹೇಳುತ್ತಾನೆ:  وقرن في بيوتكن ولا تبرجن تبرج الجاذبية التوليب ಮತ್ತು ನಿಮ್ಮ ಮನೆಗಳಲ್ಲಿ ಇರಿ, ಮತ್ತು ಹಿಂದಿನ ಅಜ್ಞಾನದ ಕಾಲದ ಪ್ರದರ್ಶನದಂತೆ ನಿಮ್ಮನ್ನು ಪ್ರದರ್ಶಿಸಬೇಡಿ " [ ಅಲ್-ಅಹ್ಜಾಬ್ : 33]. ಇಸ್ಲಾಮಿ ವಿದ್ವಾಂಸ...

ಕೆಲವರಿಗೆ ವಿವಾದಗಳೇ ಬೇಕು.ವಿವಾದಗಳಿಲ್ಲದೆ ಅವರಿಗೆ ಜೀವನವೇ ಇಲ್ಲ.

ವಿವಾದಗಳ ನಿರ್ಮಾಪಕರಾಗದೆ ನಿವಾರಕರಾಗೋಣ

✍️ *ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ*

ಕೆಲವರಿಗೆ ವಿವಾದಗಳೇ ಬೇಕು.ವಿವಾದಗಳಿಲ್ಲದೆ ಅವರಿಗೆ ಜೀವನವೇ ಇಲ್ಲ.


ಊಟದಲ್ಲಿ ಕಲ್ಲು ಸಿಕ್ಕರೆ ಕಲ್ಲನ್ನು ಬೀಸಾಡಿ ಊಟ ಮುಂದುವರಿಸ ಬೇಕು.ಇದು ಬುದ್ಧಿ ವಂತಿಕೆ.

ಅಲ್ಲದೆ ಊಟದ ಮುಂದೆ ಕುಳಿತು ಕಲ್ಲನ್ನೇ ಹುಡುಕುವವನಿಗೆ ಊಟ ಮಾಡಲು ಸಾಧ್ಯವಿಲ್ಲ.

ಅವನ ಸಮಯಗಳನ್ನೆಲ್ಲಾ 

ಕಲ್ಲು ಹುಡುಕುವುದರಲ್ಲೇ ಕಳೆಯಬೇಕಾಗುತ್ತದೆ.

ಇದೇ ರೀತಿ ಇಂದು 

ಮುಸ್ಲಿಂ ಸಮುದಾಯದ ಹೆಸರಿನಲ್ಲಿ  ಕೆಲವರು ವಿವಾದಗಳನ್ನೇ ಹುಡುಕಿ

ಸಣ್ಣ ಪುಟ್ಟ ಕಾರ್ಯಗಳನ್ನು ವೈಭವೀಕರಿಸಿ ಇಲ್ಲಸಲ್ಲದ ಅಂತೆಕಂತೆಗಳನ್ನು ಸೃಷ್ಟಿಸಿ ಅನಗತ್ಯ ವಿವಾದಗಳನ್ನು ಹುಟ್ಟು ಹಾಕಿ ಬಿಡುತ್ತಾರೆ. ಇದರಿಂದ ಮುಸ್ಲಿಮರ ವಿರುದ್ಧ ಸದಾ ಸಂಘರ್ಷವನ್ನೇ ಬಯಸುವ ವಿಚಿದ್ರಕಾರಿ ಮನೋಭಾವದವರಿಗೆ ಆಹಾರವನ್ನು ನೀಡುತ್ತಾರೆ.

ಸಾವಿರಾರು ವರ್ಷಗಳಲ್ಲಿ ಈ ಭಾರತದಲ್ಲಿ ಮುಸ್ಲಿಮರು ವಾಸಿಸುತ್ತಿದ್ದಾರೆ.

ಈ ಸುದೀರ್ಘ ಅವಧಿಯಲ್ಲಿ ಅನೇಕ ಸಮಸ್ಯೆಗಳನ್ನು ಅವರು ಎದುರಿಸಿದ್ದಾರೆ.

ಆದರೆ ಯಾವತ್ತೂ ಅನಾವಶ್ಯಕ ವಿಚಾರವಿವಾದಗಳಲ್ಲಿ ಏರ್ಪಡುತ್ತಿರಲಿಲ್ಲ.

ಯಾಕೆಂದರೆ ಇಲ್ಲಿ ಎಷ್ಟು ವಿವಾದಗಳು ಸೃಷ್ಟಿಯಾಗುತ್ತಿದೆಯೋ ಅಷ್ಟೇ ಲಾಭವನ್ನು ಇಲ್ಲಿನ ಕೋಮುವಾದಿ ಶಕ್ತಿಗಳು  ಪಡೆಯುತ್ತವೆ.

ಆದರೂ ಈ ದೇವಾಸಿಗಳಲ್ಲಿ ಬಹುತೇಕರು ಅವರು ಯಾವುದೇ ಜಾತಿ ಧರ್ಮ ವರ್ಗ ವರ್ಣ ಗಳಿಗೆ ಸೇರಿದವರಾದರೂ ಅವರೆಲ್ಲರೂ ನೆಮ್ಮದಿಯ ವಾತಾವರಣ ವನ್ನು ಬಯಸುತ್ತಾರೆ ಯೇ ಹೊರತು ಸಂಘರ್ಷವನ್ನು ಇಷ್ಟ ಪಡುವುದೇ ಇಲ್ಲ.

ಹೀಗಿರುವಾಗ ಸಣ್ಣ ಪುಟ್ಟ ಕಾರ್ಯಗಳನ್ನು ವೈಭವೀಕರಿಸಿ ವಿವಾದಗಳನ್ನು ಸೃಷ್ಟಿಸುವುದರಿಂದ ಮುಸಲ್ಮಾನರು ಇಲ್ಲಿ ಎಲ್ಲರಿಗೂ ಎಲ್ಲದರಲ್ಲೂ ಸಮಸ್ಯೆ ಎಂಬ ವಿರೋಧಿಗಳ ಅಪಪ್ರಚಾರ ಕ್ಕೆ ಪುಷ್ಠಿ ದೊರೆತಂತಾಗುತ್ತದೆ.

ಇದರಿಂದ ಮತ್ತಷ್ಟು ಉತ್ತಮ ಮನಸ್ಸುಗಳು ಮುಸ್ಲಿಮರಿಂದ ದೂರವಾಗುವ ಸಾಧ್ಯತೆ ಇದೆ.

ಇದು ಮುಸ್ಲಿಂ ವಿರೋಧಿಗಳಿಗೆ ರೋಗಿ ಬಯಸಿದ್ದು ಹಾಲು ವೈದ್ಯ ಹೇಳಿದ್ದೂ ಹಾಲು ಎಂಬ ಗಾದೆಯಂತಾಗುತ್ತದೆ ಎಂಬುದರಲ್ಲಿ ಅನುಮಾನವೇ ಇಲ್ಲ.

ಇದರಿಂದಾಗಿ ಮುಸ್ಲಿಮರು ಇಲ್ಲಿ ಅತ್ಯಂತ ಎಚ್ಚರಿಕೆಯಿಂದ ಹೆಜ್ಜೆ ಇಡ ಬೇಕಾಗಿದೆ.

ಅನೇಕ ವರ್ಷಗಳಿಂದ ಮುಸ್ಲಿಮರ ವಿರುದ್ಧ ನಡೆಯುವ ಯಾವುದೇ ಷಡ್ಯಂತ್ರಗಳಿಗೆ ಸೊಪ್ಪು ಹಾಕದ ಉದಾತ್ತ ಮನಸ್ಸಿನ ವಕ್ತಾರರ ಒಂದು ದೊಡ್ಡ ವಿಭಾಗ ಇವತ್ತೂ ಸಹ ಈ ಭಾರತದ ಮಣ್ಣಿನಲ್ಲಿ ಇದೆ ಎಂಬುದನ್ನು ಯಾರೂ ಮರೆಯಬಾರದು.

ಮೊನ್ನೆ ಪಡುಬಿದ್ರಿ ಬೀಚಿನಲ್ಲಿ ನಡೆದ ಒಂದು ನಮಾಝಿನ ವಿವಾದದ ವೀಡಿಯೋ ನೋಡಿದಾಗ ಹೀಗೆ ಗೀಚಬೇಕೆಂದನಿಸಿತು.

Comments

Popular Posts