Skip to main content

Featured

ಹಜ್ಜ್ ಅಂದರೆ ಏನು ತಪ್ಪದೇ ಓದಿ

ಹಜ್ ಕರ್ಮ ಎಂಬುವುದು ಇಸ್ಲಾಮಿನ ಐದು ಆಧಾರ ಸ್ತಂಭ ಗಳಲ್ಲಿ ಒಂದಾಗಿದೆ  ಅದನ್ನು ತನು ಮನ ಧನ ಗಳಿಂದ ಸಾಮರ್ಥ್ಯವಿರುವವರಿಗೆ ಮಾತ್ರ  ನಿರ್ವಹಿಸುವುದು ಅನಿವಾರ್ಯವಾಗಿದೆ,  ನಬಿ (ಸಲ್ಲಲ್ಲಾಹು ಅಲೈಹಿ ವಸಲ್ಲಂ) ಒಮ್ಮೆ ಮಾತ್ರ ಹಜ್ ಮಾಡಿದ್ದು ಎಂಬ ವಿಷಯ ಸತ್ಯವಲ್ಲದಿರುವುದು ದೃಢವಾಗಿದೆ, ಹಜ್ ಬಗ್ಗೆ ನಬಿಯನ್ನು ಕುರಿತು ಹಲವು ಸರಿಯಾದ ಹದೀಥ್‌ಗಳನ್ನು ದಾಖಲಿಸಲಾಗಿದೆ, ಈ ಲೇಖನದಲ್ಲಿ ನಾವು ನಬಿಯವರಿಂದ ಸತ್ಯವೆಂದು ಹೇಳಲ್ಪಟ್ಟ ಹಜ್ ಕುರಿತು ಕೆಲವು ಹದೀಥ್‌ಗಳನ್ನು ಉಲ್ಲೇಖಿಸುತ್ತೇವೆ. ಹಜ್ ಎಂಬುವದು ಭಾಷೆಯಲ್ಲಿಚ್ಛೆಯನ್ನು ಸೂಚಿಸುವದ್ದಾಗಿ ವ್ಯಾಖ್ಯಾನಿಸಲಾಗಿದೆ, ಹಜ್ಜು, ಹಜ್ಜು ಮಾಡುವುದೇ ಎಂದರೆ ಅದನ್ನು ಆಶಿಸುವುದು, ಮತ್ತು ಯಾರನ್ನಾದರೂ ಹಜ್ಜು ಮಾಡಿದೆ ಎಂದರೆ ಅವನನ್ನು ಆಶಿಸಲಾಗಿದೆ ಎಂದು ಅರ್ಥ. ಮಹಜ್ಜೂಜ್ ವ್ಯಕ್ತಿ' ಎಂದರೆ  ಆಶಿಸಿದ ವ್ಯಕ್ತಿ, ಹಾಗೂ ಹಜ್ ಎಂದರೆ ಮಹತ್ತಾದ ಆಶೆ ಎಂದು ಹೇಳಲಾಗಿದೆ. ಶರಿಯಾ ದಲ್ಲಿ ಹಜ್ ಅನ್ನು ಹೀಗೆ ವ್ಯಾಖ್ಯಾನಿಸಲಾಗಿದೆ: ಮುಸ್ಲಿಂನು ಬೇರೆ ಬೇರೆ ಸ್ಥಳಗಳಿಗೆ, ವಿಶೇಷವಾಗಿ  (ಹರಾಮ್) ಮತ್ತು ಆರಫಾ ಕಡೆಗೆ, ನಿರ್ದಿಷ್ಟ ಸಮಯದಲ್ಲಿ ಹೋಗಿ ನಿರ್ದಿಷ್ಟ ಕೆಲಸಗಳನ್ನು ಮಾಡುವುದು; ಉದಾಹರಣೆಗೆ ಆರಫಾರಲ್ಲಿ ನಿಲ್ಲುವುದು, ತವಾಫ್ ಮತ್ತು ಸಾಮಾನ್ಯವಾಗಿ ಉಲಮಾ ಗಳ ಅಭಿಪ್ರಾಯದ ಪ್ರಕಾರ ಸೈ ಎಂಬ ಕ್ರಿಯೆಗಳನ್ನು(ಅಂದರೆ ಸಫಾ ಮತ್ತು ಮರ್ವಾ ಎಂಬ ಎರಡು ಪರ್ವತ ಗಳ ಮಧ್ಯೆ ನಡೆಯುವುದು)...

ಕೆಲವರಿಗೆ ವಿವಾದಗಳೇ ಬೇಕು.ವಿವಾದಗಳಿಲ್ಲದೆ ಅವರಿಗೆ ಜೀವನವೇ ಇಲ್ಲ.

ವಿವಾದಗಳ ನಿರ್ಮಾಪಕರಾಗದೆ ನಿವಾರಕರಾಗೋಣ

✍️ *ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ*

ಕೆಲವರಿಗೆ ವಿವಾದಗಳೇ ಬೇಕು.ವಿವಾದಗಳಿಲ್ಲದೆ ಅವರಿಗೆ ಜೀವನವೇ ಇಲ್ಲ.


ಊಟದಲ್ಲಿ ಕಲ್ಲು ಸಿಕ್ಕರೆ ಕಲ್ಲನ್ನು ಬೀಸಾಡಿ ಊಟ ಮುಂದುವರಿಸ ಬೇಕು.ಇದು ಬುದ್ಧಿ ವಂತಿಕೆ.

ಅಲ್ಲದೆ ಊಟದ ಮುಂದೆ ಕುಳಿತು ಕಲ್ಲನ್ನೇ ಹುಡುಕುವವನಿಗೆ ಊಟ ಮಾಡಲು ಸಾಧ್ಯವಿಲ್ಲ.

ಅವನ ಸಮಯಗಳನ್ನೆಲ್ಲಾ 

ಕಲ್ಲು ಹುಡುಕುವುದರಲ್ಲೇ ಕಳೆಯಬೇಕಾಗುತ್ತದೆ.

ಇದೇ ರೀತಿ ಇಂದು 

ಮುಸ್ಲಿಂ ಸಮುದಾಯದ ಹೆಸರಿನಲ್ಲಿ  ಕೆಲವರು ವಿವಾದಗಳನ್ನೇ ಹುಡುಕಿ

ಸಣ್ಣ ಪುಟ್ಟ ಕಾರ್ಯಗಳನ್ನು ವೈಭವೀಕರಿಸಿ ಇಲ್ಲಸಲ್ಲದ ಅಂತೆಕಂತೆಗಳನ್ನು ಸೃಷ್ಟಿಸಿ ಅನಗತ್ಯ ವಿವಾದಗಳನ್ನು ಹುಟ್ಟು ಹಾಕಿ ಬಿಡುತ್ತಾರೆ. ಇದರಿಂದ ಮುಸ್ಲಿಮರ ವಿರುದ್ಧ ಸದಾ ಸಂಘರ್ಷವನ್ನೇ ಬಯಸುವ ವಿಚಿದ್ರಕಾರಿ ಮನೋಭಾವದವರಿಗೆ ಆಹಾರವನ್ನು ನೀಡುತ್ತಾರೆ.

ಸಾವಿರಾರು ವರ್ಷಗಳಲ್ಲಿ ಈ ಭಾರತದಲ್ಲಿ ಮುಸ್ಲಿಮರು ವಾಸಿಸುತ್ತಿದ್ದಾರೆ.

ಈ ಸುದೀರ್ಘ ಅವಧಿಯಲ್ಲಿ ಅನೇಕ ಸಮಸ್ಯೆಗಳನ್ನು ಅವರು ಎದುರಿಸಿದ್ದಾರೆ.

ಆದರೆ ಯಾವತ್ತೂ ಅನಾವಶ್ಯಕ ವಿಚಾರವಿವಾದಗಳಲ್ಲಿ ಏರ್ಪಡುತ್ತಿರಲಿಲ್ಲ.

ಯಾಕೆಂದರೆ ಇಲ್ಲಿ ಎಷ್ಟು ವಿವಾದಗಳು ಸೃಷ್ಟಿಯಾಗುತ್ತಿದೆಯೋ ಅಷ್ಟೇ ಲಾಭವನ್ನು ಇಲ್ಲಿನ ಕೋಮುವಾದಿ ಶಕ್ತಿಗಳು  ಪಡೆಯುತ್ತವೆ.

ಆದರೂ ಈ ದೇವಾಸಿಗಳಲ್ಲಿ ಬಹುತೇಕರು ಅವರು ಯಾವುದೇ ಜಾತಿ ಧರ್ಮ ವರ್ಗ ವರ್ಣ ಗಳಿಗೆ ಸೇರಿದವರಾದರೂ ಅವರೆಲ್ಲರೂ ನೆಮ್ಮದಿಯ ವಾತಾವರಣ ವನ್ನು ಬಯಸುತ್ತಾರೆ ಯೇ ಹೊರತು ಸಂಘರ್ಷವನ್ನು ಇಷ್ಟ ಪಡುವುದೇ ಇಲ್ಲ.

ಹೀಗಿರುವಾಗ ಸಣ್ಣ ಪುಟ್ಟ ಕಾರ್ಯಗಳನ್ನು ವೈಭವೀಕರಿಸಿ ವಿವಾದಗಳನ್ನು ಸೃಷ್ಟಿಸುವುದರಿಂದ ಮುಸಲ್ಮಾನರು ಇಲ್ಲಿ ಎಲ್ಲರಿಗೂ ಎಲ್ಲದರಲ್ಲೂ ಸಮಸ್ಯೆ ಎಂಬ ವಿರೋಧಿಗಳ ಅಪಪ್ರಚಾರ ಕ್ಕೆ ಪುಷ್ಠಿ ದೊರೆತಂತಾಗುತ್ತದೆ.

ಇದರಿಂದ ಮತ್ತಷ್ಟು ಉತ್ತಮ ಮನಸ್ಸುಗಳು ಮುಸ್ಲಿಮರಿಂದ ದೂರವಾಗುವ ಸಾಧ್ಯತೆ ಇದೆ.

ಇದು ಮುಸ್ಲಿಂ ವಿರೋಧಿಗಳಿಗೆ ರೋಗಿ ಬಯಸಿದ್ದು ಹಾಲು ವೈದ್ಯ ಹೇಳಿದ್ದೂ ಹಾಲು ಎಂಬ ಗಾದೆಯಂತಾಗುತ್ತದೆ ಎಂಬುದರಲ್ಲಿ ಅನುಮಾನವೇ ಇಲ್ಲ.

ಇದರಿಂದಾಗಿ ಮುಸ್ಲಿಮರು ಇಲ್ಲಿ ಅತ್ಯಂತ ಎಚ್ಚರಿಕೆಯಿಂದ ಹೆಜ್ಜೆ ಇಡ ಬೇಕಾಗಿದೆ.

ಅನೇಕ ವರ್ಷಗಳಿಂದ ಮುಸ್ಲಿಮರ ವಿರುದ್ಧ ನಡೆಯುವ ಯಾವುದೇ ಷಡ್ಯಂತ್ರಗಳಿಗೆ ಸೊಪ್ಪು ಹಾಕದ ಉದಾತ್ತ ಮನಸ್ಸಿನ ವಕ್ತಾರರ ಒಂದು ದೊಡ್ಡ ವಿಭಾಗ ಇವತ್ತೂ ಸಹ ಈ ಭಾರತದ ಮಣ್ಣಿನಲ್ಲಿ ಇದೆ ಎಂಬುದನ್ನು ಯಾರೂ ಮರೆಯಬಾರದು.

ಮೊನ್ನೆ ಪಡುಬಿದ್ರಿ ಬೀಚಿನಲ್ಲಿ ನಡೆದ ಒಂದು ನಮಾಝಿನ ವಿವಾದದ ವೀಡಿಯೋ ನೋಡಿದಾಗ ಹೀಗೆ ಗೀಚಬೇಕೆಂದನಿಸಿತು.

Comments

Popular Posts