Skip to main content

Featured

ನೀವು ಜೀವಿಸುವ ಪದ್ಧತಿ ಹೇಗೇ

  ಪ್ರತಿಯೊಬ್ಬ ಮಹಿಳೆಯೂ ಅಸಭ್ಯ ಉಡುಗೆ ತೊಡುಗೆ, ಬಟ್ಟೆ ತೆಗೆಯುವಿಕೆ ಮತ್ತು ಪ್ರಲೋಭನೆಯನ್ನು ಪ್ರಚೋದಿಸುವ ಯಾವುದೇ ವಿಷಯದ ಬಗ್ಗೆ ಎಚ್ಚರದಿಂದಿರಬೇಕು, ಏಕೆಂದರೆ ಒಬ್ಬ ಮಹಿಳೆಯನ್ನು ಆರತ್ ಎಂದು ಪರಿಗಣಿಸಲಾಗುತ್ತದೆ ಮತ್ತು ಪುರುಷರು ಸ್ವಾಭಾವಿಕವಾಗಿ ಅವಳ ಕಡೆಗೆ ಆಕರ್ಷಿತರಾಗುತ್ತಾರೆ,  ಅವಳು ಅವರ ಕಡೆಗೆ ಆಕರ್ಷಿತರಾಗುತ್ತಾಳೆ. ಅಲ್ಲಾಹನು ತಾನು ರಕ್ಷಿಸುವವರನ್ನು ಮಾತ್ರ ರಕ್ಷಿಸುತ್ತಾನೆ ಮತ್ತು ಅವನು ಸಂರಕ್ಷಿಸುವವರನ್ನು ಮಾತ್ರ ಸಂರಕ್ಷಿಸುತ್ತಾನೆ. ಆದ್ದರಿಂದ, ಪುರುಷರು ಮತ್ತು ಮಹಿಳೆಯರು ಇಬ್ಬರೂ ಜಾಗರೂಕರಾಗಿರಬೇಕು. ಪುರುಷರು ತಮ್ಮ ನೋಟವನ್ನು ಕಡಿಮೆ ಮಾಡಬೇಕು, ಪುರುಷರೊಂದಿಗೆ ಏಕಾಂತತೆಯನ್ನು ತಪ್ಪಿಸಬೇಕು ಮತ್ತು ಪ್ರಲೋಭನೆಯ ಎಲ್ಲಾ ಕಾರಣಗಳ ಬಗ್ಗೆ ಎಚ್ಚರದಿಂದಿರಬೇಕು. ಅದೇ ರೀತಿ, ಮಹಿಳೆಯರು ಪುರುಷರೊಂದಿಗೆ ಏಕಾಂಗಿಯಾಗಿರುವುದು , ಸಾರ್ವಜನಿಕವಾಗಿ ತಮ್ಮ ಸೌಂದರ್ಯ ಮತ್ತು ಮೋಡಿಗಳನ್ನು ಪ್ರದರ್ಶಿಸುವುದು ಮತ್ತು ಸಂಬಂಧವಿಲ್ಲದ ಪುರುಷರ ಮುಂದೆ ತಮ್ಮನ್ನು ತಾವು ಬಹಿರಂಗಪಡಿಸುವಂತಹ ಪ್ರಲೋಭನೆಯ ಕಾರಣಗಳ ಬಗ್ಗೆ ಎಚ್ಚರದಿಂದಿರಬೇಕು. ಸರ್ವಶಕ್ತ ನಾದ ಅಲ್ಲಾಹನು ಹೇಳುತ್ತಾನೆ:  وقرن في بيوتكن ولا تبرجن تبرج الجاذبية التوليب ಮತ್ತು ನಿಮ್ಮ ಮನೆಗಳಲ್ಲಿ ಇರಿ, ಮತ್ತು ಹಿಂದಿನ ಅಜ್ಞಾನದ ಕಾಲದ ಪ್ರದರ್ಶನದಂತೆ ನಿಮ್ಮನ್ನು ಪ್ರದರ್ಶಿಸಬೇಡಿ " [ ಅಲ್-ಅಹ್ಜಾಬ್ : 33]. ಇಸ್ಲಾಮಿ ವಿದ್ವಾಂಸ...

ಸುಪ್ತಾವಸ್ತೆಯ ಶಿಕ್ಷೆಯಿಂದ ಜಾಗ್ರತರಾಗಿರು


 ಸುಪ್ತಾವಸ್ತೆಯ ಶಿಕ್ಷೆಯಿಂದ ಜಾಗ್ರತರಾಗಿರು

ಒಮ್ಮೆ ಒಬ್ಬ ಬಾಲಕ ಹಸನುಲ್ ಬಸ್ರೀ (ರ.ಅ)ರವರ ಬಳಿ ಬಂದು ಹೀಗೆ ಕೇಳಿದನು 

ಓ ಶೈಖರೇ ನಾನು ಹಲವರಿಂದ ಕೇಳಿದೆ ಅಲ್ಲಾಹು ಎಲ್ಲಾ ಪಾಪಗಳಿಗೆ ಶಿಕ್ಷೆ ನೀಡಲಿದ್ದಾನೆ. ಆದರೆ ನಾನು ತುಂಬಾ ಪಾಪ  ಮಾಡಿದವನಾಗಿದ್ದೇನೆ ನನಗೇಕೆ ಶಿಕ್ಷೆ ಆಗಲಿಲ್ಲ. ಎಂದು ಕೇಳಿದ ತಕ್ಷಣವೇ ಹಸನುಲ್ ಬಸ್ರಿ ಹೇಳಿದರು. ಓ ಬಾಲಕ ಅಲ್ಲಾಹನು ಅನೇಕ ಸಲ ನಿನ್ನನ್ನು ಶಿಕ್ಷಿಸಿದ್ದಾನೆ ನಿನಗೆ ತಿಳಿಯಲಿಲ್ಲವೇ. 

ಬಾಲಕ ಕೇಳಿದ ಹೇಗೆ ಶೈಖರೇ ವಿವರಿಸಿ ಆವಾಗ ಹಸನುಲ್ ಬಸ್ರಿ ರ.ಅ ಹೇಳಿದರು. 

ನೀನು ಅಲ್ಲಾಹನನ್ನು ಶ್ರದ್ಧೆಯಿಂದ ಕೂಗಿ ಪ್ರಾರ್ಥಿಸುವ ಭಾಗ್ಯ ಇಲ್ಲವಾಗಿಸಲಿಲ್ಲವೇ. ಕುರ್ಆನ್ ಪಾರಾಯಣ ಮಾಡದೆ ಎಷ್ಟೋ ದಿವಸ ನೀನು ಕಳೆಯಲಿಲ್ಲವೇ. ರಾತ್ರಿಯಲ್ಲಿ ಎದ್ದು ಪ್ರಾರ್ಥಿಸುವುದರಿಂದ ವಂಚಿತನಾಗಲಿಲ್ಲವೇ. ಕಾಮ ಹಣದ ಆಸೆ ಎಂಬ ದುರಬ್ಯಾಸದ ಸಂಕೋಲೆಯಲ್ಲಿ ಸಿಲುಕಿ ಕೊಳ್ಳಲಿಲ್ಲವೇ. ನಿನ್ನ ಹ್ರದಯದಲ್ಲಿ ಅಲ್ಲಾಹನ ಸ್ಮರಣೆಯ ಅನುಗ್ರಹ ಬಾರವೆಂದು ಭಾವಿಸಿ ಅವನ ಸ್ಮರಣೆಯಿಂದ ವಂಚಿತನಾಗಲಿಲ್ಲವೇ.. ಸುಳ್ಳು ಫಿತ್ನ ಫಸಾದ್ ಪರದೂಷಣ ಗಳಿಂದ ನಿನ್ನ ನಾಲಿಗೆ ಕಾರ್ಯನಿರತ ಆಗಲಿಲ್ಲವೇ. ಪರಲೋಕ ವನ್ನು ಮರೆತು ಇಹ ಲೋಕದ ಆಡಂಬರದ ಜೀವನವನ್ನು ಮೈಗೂಡಿಸಿ ಕೋಳ್ಳಲಿಲ್ಲವೇ. ರಂಝಾನ್ ಶವ್ವಾಲ್ ಹಜ್ ಗಳಂತಹ ತಿಂಗಳು ಗಳ ಗೌರವವನ್ನು ಕಡೆಗಣಿಸಿ ನಡೆಯಲಿಲ್ಲವೇ. 

ನೆನಪಿಡು ಅಲ್ಲಾಹನ ಶಿಕ್ಷೆ ಅತೀ ಕಠೋರವಾದದ್ದು. 

ನೀನು ಊಹಿಸುವುದಕ್ಕಿಂತ  ಅದೇನಂದರೆ 

ನಿನಗೆ ಪರ ಲೋಕ ವನ್ನು ಮರೆತು ಬಿಡುವಂತಹ ಇಹಲೋಕ ದ ಸರ್ವ ಸಂಪತ್ತು ಗಳನ್ನು ಒದಗಿಸಿ ಕೊಡುವುದು. ಧಾರ್ಮಿಕ ವಿದ್ಯೆಗೆ ಬದಲಾಗಿ ಲೌಕಿಕ ವಿಧ್ಯೆ ಒದಗಿಸಿ ಕೊಡುವುದು. ನಿನಗೆ ಅಧಿಕ ಸಂಪತ್ತು ನೀಡುವುದು. ಆದರೆ ಅಲ್ಲಾಹನ ಅನುಸರಣೆ ಹಾಗು ಪ್ರಾರ್ಥನೆ ಯಿಂದ ವಂಚಿತನಾಗುವೆ. ಇದಾಗಿದೆ ಅಲ್ಲಾಹನ ಇಹ ಲೋಕದ ಅತೀ ಕಠೋರ ವಾದ ಶಿಕ್ಷೆ. ನಿನಗೆ ಅರಿವಿಲ್ಲದೆ ಹೇಗಲ್ಲ ಶಿಕ್ಷಿಸಿದ ಮಾನವ. ಎಚ್ಚೆತ್ತುಕೋ ನಿನ್ನ ಮರಣ ಸಮೀಪಿಸುವ ಮುನ್ನ...

Comments

Popular Posts