Skip to main content

Featured

ನೀವು ಜೀವಿಸುವ ಪದ್ಧತಿ ಹೇಗೇ

  ಪ್ರತಿಯೊಬ್ಬ ಮಹಿಳೆಯೂ ಅಸಭ್ಯ ಉಡುಗೆ ತೊಡುಗೆ, ಬಟ್ಟೆ ತೆಗೆಯುವಿಕೆ ಮತ್ತು ಪ್ರಲೋಭನೆಯನ್ನು ಪ್ರಚೋದಿಸುವ ಯಾವುದೇ ವಿಷಯದ ಬಗ್ಗೆ ಎಚ್ಚರದಿಂದಿರಬೇಕು, ಏಕೆಂದರೆ ಒಬ್ಬ ಮಹಿಳೆಯನ್ನು ಆರತ್ ಎಂದು ಪರಿಗಣಿಸಲಾಗುತ್ತದೆ ಮತ್ತು ಪುರುಷರು ಸ್ವಾಭಾವಿಕವಾಗಿ ಅವಳ ಕಡೆಗೆ ಆಕರ್ಷಿತರಾಗುತ್ತಾರೆ,  ಅವಳು ಅವರ ಕಡೆಗೆ ಆಕರ್ಷಿತರಾಗುತ್ತಾಳೆ. ಅಲ್ಲಾಹನು ತಾನು ರಕ್ಷಿಸುವವರನ್ನು ಮಾತ್ರ ರಕ್ಷಿಸುತ್ತಾನೆ ಮತ್ತು ಅವನು ಸಂರಕ್ಷಿಸುವವರನ್ನು ಮಾತ್ರ ಸಂರಕ್ಷಿಸುತ್ತಾನೆ. ಆದ್ದರಿಂದ, ಪುರುಷರು ಮತ್ತು ಮಹಿಳೆಯರು ಇಬ್ಬರೂ ಜಾಗರೂಕರಾಗಿರಬೇಕು. ಪುರುಷರು ತಮ್ಮ ನೋಟವನ್ನು ಕಡಿಮೆ ಮಾಡಬೇಕು, ಪುರುಷರೊಂದಿಗೆ ಏಕಾಂತತೆಯನ್ನು ತಪ್ಪಿಸಬೇಕು ಮತ್ತು ಪ್ರಲೋಭನೆಯ ಎಲ್ಲಾ ಕಾರಣಗಳ ಬಗ್ಗೆ ಎಚ್ಚರದಿಂದಿರಬೇಕು. ಅದೇ ರೀತಿ, ಮಹಿಳೆಯರು ಪುರುಷರೊಂದಿಗೆ ಏಕಾಂಗಿಯಾಗಿರುವುದು , ಸಾರ್ವಜನಿಕವಾಗಿ ತಮ್ಮ ಸೌಂದರ್ಯ ಮತ್ತು ಮೋಡಿಗಳನ್ನು ಪ್ರದರ್ಶಿಸುವುದು ಮತ್ತು ಸಂಬಂಧವಿಲ್ಲದ ಪುರುಷರ ಮುಂದೆ ತಮ್ಮನ್ನು ತಾವು ಬಹಿರಂಗಪಡಿಸುವಂತಹ ಪ್ರಲೋಭನೆಯ ಕಾರಣಗಳ ಬಗ್ಗೆ ಎಚ್ಚರದಿಂದಿರಬೇಕು. ಸರ್ವಶಕ್ತ ನಾದ ಅಲ್ಲಾಹನು ಹೇಳುತ್ತಾನೆ:  وقرن في بيوتكن ولا تبرجن تبرج الجاذبية التوليب ಮತ್ತು ನಿಮ್ಮ ಮನೆಗಳಲ್ಲಿ ಇರಿ, ಮತ್ತು ಹಿಂದಿನ ಅಜ್ಞಾನದ ಕಾಲದ ಪ್ರದರ್ಶನದಂತೆ ನಿಮ್ಮನ್ನು ಪ್ರದರ್ಶಿಸಬೇಡಿ " [ ಅಲ್-ಅಹ್ಜಾಬ್ : 33]. ಇಸ್ಲಾಮಿ ವಿದ್ವಾಂಸ...

ಶಿಹಾಬ್‌ರನ್ನು ಸ್ವಾಗತಿಸುವ ಮೊದಲು.

 *ಶಿಹಾಬ್‌ರನ್ನು ಸ್ವಾಗತಿಸುವ ಮೊದಲು..*



ಕಾಲ್ನಡಿಗೆಯ ಮೂಲಕ ಹಜ್‌ ಕರ್ಮಕ್ಕೆ ಹೊರಟ ಕೇರಳದ ಶಿಹಾಬ್ ಈಗಾಗಲೇ ಕರ್ನಾಟಕದ ಗಡಿ ದಾಟಲಿದ್ದಾರೆ. ಕೇರಳಿಗರು ಈ ಮೂವತ್ತರ ತರುಣನ ಸಾಹಸಿಕ ಯಾತ್ರೆಗೆ ನೀಡಿದ್ದು ಭವ್ಯ ಸ್ವಾಗತ, ಹೃದ್ಯ ಬೀಳ್ಕೊಡುಗೆ. ಅಲ್ಲಿ ಧರ್ಮ, ಪಕ್ಷಗಳನ್ನು ಮೀರಿ ದಾರಿಯುದ್ದಕ್ಕೂ ಶಿಹಾಬ್ ಸ್ವೀಕರಿಸಲ್ಪಟ್ಟಿದ್ದಾನೆ. ಆದರೆ ಕರ್ನಾಟಕದ ವಿಚಾರಕ್ಕೆ ಬಂದರೆ ಇಲ್ಲಿನ ಸನ್ನಿವೇಶಕ್ಕೆ ಮತೀಯ, ರಾಜಕೀಯ ಚಹರೆಯಿದೆ. ಅದರಲ್ಲೂ ಕರಾವಳಿ ಕೋಮು ಸೂಕ್ಷ್ಮ ಪ್ರದೇಶ. ಮಾಧ್ಯಮಗಳ ಅತ್ಯಾಚಾರದಿಂದ ಇಲ್ಲಿನ ಮತೀಯ ವಾತಾವರಣ ಈಗಾಗಲೇ ಮಲಿನವಾಗಿ ಬಿಟ್ಟಿದೆ. ಹಾಗಿರುವಾಗ ಕೇರಳದ ಭವ್ಯ ಬೀಳ್ಕೊಡುಗೆಗೂ ಕರ್ನಾಕಟದ ಬೀಳ್ಕೊಡುಗೆಗೂ ಅನೇಕ ಭಿನ್ನತೆಗಳಿವೆ. ಅಲ್ಲಿ ಆತನನ್ನು ತಕ್ಬೀರ್‌, ತಲ್ಬಿಯತ್, ಸ್ವಲಾತ್‌ಗಳಿಂದ ಬರಮಾಡಿಕೊಂಡಿದ್ದಾರೆ. ಆದರೆ ಇಲ್ಲಿ ಪುಂಡರ ಮುಂದೆ ತಕ್ಬೀರ್ ಕರೆದ ಹುಡುಗಿಯೊಬ್ಬಳು ಈಗಲೂ ಮಾಧ್ಯಮಗಳ ಶೋಷಣೆಗೆ ಒಳಗಾಗುತ್ತಿದ್ದಾಳೆ. ಹೀಗಿರುವಾಗ ನಾವು ಆತನನ್ನು ಸ್ವೀಕರಿಸಬೇಕಾದ ರೀತಿ ಹೇಗಿರಬೇಕೆಂಬುದು ಪ್ರತಿಯೊಬ್ಬನಿಗೂ ತಿಳಿದಿರಬೇಕು. ಅತಿಥಿ ಸ್ವೀಕಾರ ಮತ್ತು ಸತ್ಕಾರದಲ್ಲಿ ಕರಾವಳಿಗರಾದ ನಾವು ಒಂದು ಹೆಜ್ಜೆ ಮುಂದೆಯೇ. ಆದರೆ ಶಿಹಾಬ್ ವಿಚಾರದಲ್ಲಿ ನಮ್ಮ ಆತಿಥ್ಯ ಅತಿರೇಕವಾದರೆ ಆಪತ್ತಿಗೆ ದಾರಿಯಾಗಲಿದೆ. ಮಾಧ್ಯಮಕ್ಕೆ, ಸಂಘಪರಿವಾರದ ಐಟಿ ಪಡೆಗೆ ಆಹಾರವಾಗಲಿದೆ. ಅರೆಕ್ಷಣದ ಆವೇಶ ನಮ್ಮ ಅನೇಕ ಯುವಕರನ್ನು ಪರಿಸರ ಪ್ರಜ್ಞೆ ತಪ್ಪುವಂತೆ ಮಾಡುತ್ತದೆ. ಅಪದ್ಧ ಘೋಷಣೆ, ಜೈಕಾರಗಳಿಂದ ಸಾರ್ವಜನಿಕರಿಗೆ ತೊಂದರೆಯೇ ಹೆಚ್ಚು. ಶಿಹಾಬ್ ಆಗಮನದ ವೇಳೆ ಹಾಗೊಂಥರ ಅತಿರೇಕ ಸಂಭವಿಸಿ, ಮಾಧ್ಯಮಗಳ ಹಾಗೂ ಸೋಶಿಯಲ್ ಮೀಡಿಯಾದ ಪುಂಡರ ಬಾಯಿಗೆ ಆಹಾರವಾದರೆ ಆ ಯುವಕನ ನಿಯ್ಯತ್ತು, ನಿಷ್ಟೆಗೆ ನಾವು ದ್ರೋಹ ಬಗೆದಂತಾಗುತ್ತೇವೆ. ಆತನ ಮುಂದಿನ ದಾರಿಯ ಮುಳ್ಳಾಗಿ, ಮುಳುವಾಗುತ್ತೇವೆ. ಆದ್ದರಿಂದ ಕನಿಷ್ಠ ಸಾರ್ವಜನಿಕ ಸ್ವಾಸ್ಥ್ಯ ಹಾಳಾಗದಂತೆ, ರಸ್ತೆ ಅಡಚಣೆಯಾಗದಂತೆ, ಮಾಧ್ಯಮಗಳ ಕಣ್ಣಿಗೆ ಹುಳುಕು ಹುಡಕಲು ಅತಿರೇಕ ಸಂಭವಿಸದಂತೆ ತಮ್ಮನ್ನು ನಿಯಂತ್ರಿಸಿಕೊಳ್ಳುವಷ್ಟು ಪ್ರಾಪ್ತಿ, ಪರಿಸರ ಪ್ರಜ್ಞೆ ಇರುವವರಿಗೆ ಮಾತ್ರ ಶಿಹಾಬ್‌ರನ್ನು ಸ್ವಾಗತಿಸುವ ಅರ್ಹತೆಯಿದೆ.


  ~ಟಿ.ಎಂ ಸ‌ಅದಿ ತಂಬಿನಮಕ್ಕಿ

Comments

Popular Posts