Skip to main content

Featured

ಹಜ್ಜ್ ಅಂದರೆ ಏನು ತಪ್ಪದೇ ಓದಿ

ಹಜ್ ಕರ್ಮ ಎಂಬುವುದು ಇಸ್ಲಾಮಿನ ಐದು ಆಧಾರ ಸ್ತಂಭ ಗಳಲ್ಲಿ ಒಂದಾಗಿದೆ  ಅದನ್ನು ತನು ಮನ ಧನ ಗಳಿಂದ ಸಾಮರ್ಥ್ಯವಿರುವವರಿಗೆ ಮಾತ್ರ  ನಿರ್ವಹಿಸುವುದು ಅನಿವಾರ್ಯವಾಗಿದೆ,  ನಬಿ (ಸಲ್ಲಲ್ಲಾಹು ಅಲೈಹಿ ವಸಲ್ಲಂ) ಒಮ್ಮೆ ಮಾತ್ರ ಹಜ್ ಮಾಡಿದ್ದು ಎಂಬ ವಿಷಯ ಸತ್ಯವಲ್ಲದಿರುವುದು ದೃಢವಾಗಿದೆ, ಹಜ್ ಬಗ್ಗೆ ನಬಿಯನ್ನು ಕುರಿತು ಹಲವು ಸರಿಯಾದ ಹದೀಥ್‌ಗಳನ್ನು ದಾಖಲಿಸಲಾಗಿದೆ, ಈ ಲೇಖನದಲ್ಲಿ ನಾವು ನಬಿಯವರಿಂದ ಸತ್ಯವೆಂದು ಹೇಳಲ್ಪಟ್ಟ ಹಜ್ ಕುರಿತು ಕೆಲವು ಹದೀಥ್‌ಗಳನ್ನು ಉಲ್ಲೇಖಿಸುತ್ತೇವೆ. ಹಜ್ ಎಂಬುವದು ಭಾಷೆಯಲ್ಲಿಚ್ಛೆಯನ್ನು ಸೂಚಿಸುವದ್ದಾಗಿ ವ್ಯಾಖ್ಯಾನಿಸಲಾಗಿದೆ, ಹಜ್ಜು, ಹಜ್ಜು ಮಾಡುವುದೇ ಎಂದರೆ ಅದನ್ನು ಆಶಿಸುವುದು, ಮತ್ತು ಯಾರನ್ನಾದರೂ ಹಜ್ಜು ಮಾಡಿದೆ ಎಂದರೆ ಅವನನ್ನು ಆಶಿಸಲಾಗಿದೆ ಎಂದು ಅರ್ಥ. ಮಹಜ್ಜೂಜ್ ವ್ಯಕ್ತಿ' ಎಂದರೆ  ಆಶಿಸಿದ ವ್ಯಕ್ತಿ, ಹಾಗೂ ಹಜ್ ಎಂದರೆ ಮಹತ್ತಾದ ಆಶೆ ಎಂದು ಹೇಳಲಾಗಿದೆ. ಶರಿಯಾ ದಲ್ಲಿ ಹಜ್ ಅನ್ನು ಹೀಗೆ ವ್ಯಾಖ್ಯಾನಿಸಲಾಗಿದೆ: ಮುಸ್ಲಿಂನು ಬೇರೆ ಬೇರೆ ಸ್ಥಳಗಳಿಗೆ, ವಿಶೇಷವಾಗಿ  (ಹರಾಮ್) ಮತ್ತು ಆರಫಾ ಕಡೆಗೆ, ನಿರ್ದಿಷ್ಟ ಸಮಯದಲ್ಲಿ ಹೋಗಿ ನಿರ್ದಿಷ್ಟ ಕೆಲಸಗಳನ್ನು ಮಾಡುವುದು; ಉದಾಹರಣೆಗೆ ಆರಫಾರಲ್ಲಿ ನಿಲ್ಲುವುದು, ತವಾಫ್ ಮತ್ತು ಸಾಮಾನ್ಯವಾಗಿ ಉಲಮಾ ಗಳ ಅಭಿಪ್ರಾಯದ ಪ್ರಕಾರ ಸೈ ಎಂಬ ಕ್ರಿಯೆಗಳನ್ನು(ಅಂದರೆ ಸಫಾ ಮತ್ತು ಮರ್ವಾ ಎಂಬ ಎರಡು ಪರ್ವತ ಗಳ ಮಧ್ಯೆ ನಡೆಯುವುದು)...

SYS ಸಮ್ಮೇಳನ ವಿಜಯಗೊಳಿಸಿ.



ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ.........

ಕಳೆದ 30 ವರ್ಷಗಳಿಂದ ಕರುನಾಡ ಮಣ್ಣಿನಲ್ಲಿ ಅತ್ಯಂತ ಶಿಸ್ತು ಬದ್ಧ ಸಂಘಟನೆಯಾಗಿ ಉಲಮಾ ಉಮರಾ ಸಮೂಹವನ್ನು ಒಗ್ಗೂಡಿಸಿ ಇಸ್ಲಾಮಿನ ನೈಜ ತತ್ವಾದರ್ಶಗಳನ್ನು ಸಂರಕ್ಷಣೆ ಮಾಡುತ್ತಾ ಕಾರ್ಯಾಚರಿಸುವ ಮಾದರೀ ಸಂಘಟನೆಯಾಗಿದೆ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ರಿ).

ಶಿಕ್ಷಣ,ಸಾಂತ್ವನ,ಸಾಂಸ್ಕೃತಿಕ,ಸಾಮಾಜಿಕ,ಧಾರ್ಮಿಕ ಮುಂತಾದ ವಲಯಗಳಲ್ಲಿ ಶ್ಲಾಘನೀಯ ಸೇವೆಗಳನ್ನು ಮಾಡುತ್ತಾ ಜನಶ್ರದ್ಧೆಯನ್ನು ಪಡೆದು ಇದೀಗ ಮೂವತ್ತರ ಸಂಬ್ರಮದಲ್ಲಿದೆ SYS.

ಕಳೆದ ಒಂದು ವರ್ಷವನ್ನು ಮೂವತ್ತನೇ ವಾರ್ಷಿಕ ವರ್ಷವೆಂದು ಘೋಷಿಸಿ ವಿವಿಧ ಗಮನಾರ್ಹ ಕಾರ್ಯಕ್ರಮಗಳ ಮೂಲಕ ಆಚರಿಸಿ ಇದೀಗ ಜನವರಿ 24 ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಸಮಾರೋಪ ಮಹಾ ಸಮ್ಮೇಳನ ನಡೆಯಲಿದೆ.

ಕಳೆದ ಹಲವು ದಿನಗಳಿಂದ ಇದರ ರಾಜ್ಯಾಧ್ಯಕ್ಷ ಬಹು ಹಫೀಳ್ ಸಅದಿ, ಪ್ರಧಾನ ಕಾರ್ಯದರ್ಶಿ ಸಾದಿಖ್ ಮಾಸ್ಟರ್ ಮಲಬೆಟ್ಟು, ಕೊಶಾಧಿಕಾರಿ ಅಡ್ವೊಕೇಟ್ ಹಂಝತ್  ಹಾಗೂ ಸ್ವಾಗತ ಸಮಿತಿ ಚೇರ್ಮನ್ ಮುಂತಾಝಲಿ ಹಾಜಿ ಕನ್ವೀನರ್ ಶಕೀರ್ ಹಾಜಿ ಟ್ರಶರರ್ ಶಾಫಿ ಸಅದಿ ಮುಂತಾದವರ ನಾಯಕತ್ವದಲ್ಲಿ ಭರ್ಜರಿ ಸಿದ್ದತೆಗಳು ಬರದಿಂದ ನಡೆಯುತ್ತಿದೆ.

ಜಾಗತಿಕ ವಿದ್ವಾಂಸ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಾಯಕತ್ವದಲ್ಲಿ ನಡೆಯುವ ಪ್ರಸ್ತುತ ಐತಿಹಾಸಿಕ ಸಮ್ಮೇಳನದಲ್ಲಿ ಲಕ್ಷಾಂತರ ಜನ ಬಾಗವಹಿಸುವ ನಿರೀಕ್ಷೆಯಿದೆ.

ಎಲ್ಲಾ ಸಹೋದರರು ಪ್ರಸ್ತುತ ಸಮ್ಮೇಳನದಲ್ಲಿ ಬಾಗವಹಿಸಿ ಸಂಪೂರ್ಣ ಯಶಸ್ವಿಗೊಳಿಸಿ ದನ್ಯರಾಗಬೇಕೆಂದು ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಬಹು ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ ಕರೆ ನೀಡಿರುತ್ತಾರೆ.

ವರದಿ: ಅಬ್ದುಸ್ಸಲಾಮ್ ಮದನಿ ಗುಂಡುಕಲ್ಲು...

Comments

Popular Posts