Skip to main content

Featured

ಮದೀನಾ ಹೆದ್ದಾರಿಯಲ್ಲಿ ಭಯಂಕರ ದುರಂತ

ಸೌದಿ ಅರೇಬಿಯಾದ ಮದೀನಾದಲ್ಲಿ ಸೋಮವಾರ ಬೆಳಿಗ್ಗೆ ಒಂದು ಭಯಂಕರ  ದುರಂತ ಅಪಘಾತ ಸಂಭವಿಸಿದ್ದು, ಭಾರತದ ಆನೇಕ ಯಾತ್ರಿಕರು ಮರಣ ಹೊಂದಿದ್ದಾರೆ. ಮೆಕ್ಕಾ-ಮದೀನಾ ಹೆದ್ದಾರಿಯಲ್ಲಿ ಮದೀನಾ ಯಾತ್ರಿಗಳ ಬಸ್ ತೈಲ ಟ್ಯಾಂಕರ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಬೆಂಕಿಗೆ ಆಹುತಿಯಾಗಿ ಅನೇಕ ಪ್ರಯಾಣಿಕರು ತಕ್ಷಣ ಅಲ್ಲಾಹನ ಕರೆಗೆ ಓಗೊಟ್ಟು ಇಹಲೋಕ ತ್ಯಜಿಸಿದ್ದಾರೆ  ಈ ಘಟನೆಯ ರಾಜ್ಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ, ಸಾಮಾಜಿಕ ಮಾಧ್ಯಮ ಗಳಲ್ಲಿ ಪ್ರಸಾರವಾಗುವ ವೀಡಿಯೊಗಳಲ್ಲಿ ಸೆರೆಹಿಡಿಯಲಾದ ಆಘಾತಕಾರಿ ದೃಶ್ಯಗಳ ನಡುವೆ ಅರಬ್ ಮತ್ತು ಜಾಗತಿಕ ಸಾರ್ವಜನಿಕರಿಂದ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ. ಮರಣ ಹೊಂದಿದ ಜನರ ಸಂಖ್ಯೆ ಸೌದಿ ಅರೇಬಿಯಾ ಮತ್ತು ಭಾರತದಿಂದ ಅಧಿಕೃತ ಪ್ರತಿಕ್ರಿಯೆಗಳು ಮತ್ತು ಅಪಘಾತದ ನಿಖರವಾದ ಕಾರಣವನ್ನು ನಿರ್ಧರಿಸಲು ನಡೆಯುತ್ತಿರುವ ತನಿಖೆಯ ನವೀಕರಣಗಳನ್ನು ಒಳಗೊಂಡಂತೆ ಮದೀನಾ ಅಪಘಾತದ ಸಂಪೂರ್ಣ ವಿವರಗಳನ್ನು ನಾವು ಪ್ರಸ್ತುತಪಡಿಸುತ್ತೇವೆ. ಸೌದಿ ಮತ್ತು ಭಾರತೀಯ ಮಾಧ್ಯಮ ವರದಿಗಳ ಪ್ರಕಾರ, ಸೋಮವಾರ ಬೆಳಿಗ್ಗೆ ಸುಮಾರು 46 ಭಾರತೀಯ ಯಾತ್ರಿಕರನ್ನು ಹೊತ್ತ ಬಸ್ ಮೆಕ್ಕಾದಿಂದ ಮದೀನಾಕ್ಕೆ ಪ್ರವಾದಿ ಮಸೀದಿಗೆ ಭೇಟಿ ನೀಡಲು ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಭಾರತೀಯ ಕಾಲಮಾನ ಸುಮಾರು 1:30 ಗಂಟೆಗೆ (ಸೌದಿ ಕಾಲಮಾನ ಸುಮಾರು 5:00 ಗಂಟೆಗೆ), ಬಸ್ ಹೆದ್ದಾರಿಯಲ್ಲಿ ...

SYS ಸಮ್ಮೇಳನ ವಿಜಯಗೊಳಿಸಿ.



ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ.........

ಕಳೆದ 30 ವರ್ಷಗಳಿಂದ ಕರುನಾಡ ಮಣ್ಣಿನಲ್ಲಿ ಅತ್ಯಂತ ಶಿಸ್ತು ಬದ್ಧ ಸಂಘಟನೆಯಾಗಿ ಉಲಮಾ ಉಮರಾ ಸಮೂಹವನ್ನು ಒಗ್ಗೂಡಿಸಿ ಇಸ್ಲಾಮಿನ ನೈಜ ತತ್ವಾದರ್ಶಗಳನ್ನು ಸಂರಕ್ಷಣೆ ಮಾಡುತ್ತಾ ಕಾರ್ಯಾಚರಿಸುವ ಮಾದರೀ ಸಂಘಟನೆಯಾಗಿದೆ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ರಿ).

ಶಿಕ್ಷಣ,ಸಾಂತ್ವನ,ಸಾಂಸ್ಕೃತಿಕ,ಸಾಮಾಜಿಕ,ಧಾರ್ಮಿಕ ಮುಂತಾದ ವಲಯಗಳಲ್ಲಿ ಶ್ಲಾಘನೀಯ ಸೇವೆಗಳನ್ನು ಮಾಡುತ್ತಾ ಜನಶ್ರದ್ಧೆಯನ್ನು ಪಡೆದು ಇದೀಗ ಮೂವತ್ತರ ಸಂಬ್ರಮದಲ್ಲಿದೆ SYS.

ಕಳೆದ ಒಂದು ವರ್ಷವನ್ನು ಮೂವತ್ತನೇ ವಾರ್ಷಿಕ ವರ್ಷವೆಂದು ಘೋಷಿಸಿ ವಿವಿಧ ಗಮನಾರ್ಹ ಕಾರ್ಯಕ್ರಮಗಳ ಮೂಲಕ ಆಚರಿಸಿ ಇದೀಗ ಜನವರಿ 24 ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಸಮಾರೋಪ ಮಹಾ ಸಮ್ಮೇಳನ ನಡೆಯಲಿದೆ.

ಕಳೆದ ಹಲವು ದಿನಗಳಿಂದ ಇದರ ರಾಜ್ಯಾಧ್ಯಕ್ಷ ಬಹು ಹಫೀಳ್ ಸಅದಿ, ಪ್ರಧಾನ ಕಾರ್ಯದರ್ಶಿ ಸಾದಿಖ್ ಮಾಸ್ಟರ್ ಮಲಬೆಟ್ಟು, ಕೊಶಾಧಿಕಾರಿ ಅಡ್ವೊಕೇಟ್ ಹಂಝತ್  ಹಾಗೂ ಸ್ವಾಗತ ಸಮಿತಿ ಚೇರ್ಮನ್ ಮುಂತಾಝಲಿ ಹಾಜಿ ಕನ್ವೀನರ್ ಶಕೀರ್ ಹಾಜಿ ಟ್ರಶರರ್ ಶಾಫಿ ಸಅದಿ ಮುಂತಾದವರ ನಾಯಕತ್ವದಲ್ಲಿ ಭರ್ಜರಿ ಸಿದ್ದತೆಗಳು ಬರದಿಂದ ನಡೆಯುತ್ತಿದೆ.

ಜಾಗತಿಕ ವಿದ್ವಾಂಸ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಾಯಕತ್ವದಲ್ಲಿ ನಡೆಯುವ ಪ್ರಸ್ತುತ ಐತಿಹಾಸಿಕ ಸಮ್ಮೇಳನದಲ್ಲಿ ಲಕ್ಷಾಂತರ ಜನ ಬಾಗವಹಿಸುವ ನಿರೀಕ್ಷೆಯಿದೆ.

ಎಲ್ಲಾ ಸಹೋದರರು ಪ್ರಸ್ತುತ ಸಮ್ಮೇಳನದಲ್ಲಿ ಬಾಗವಹಿಸಿ ಸಂಪೂರ್ಣ ಯಶಸ್ವಿಗೊಳಿಸಿ ದನ್ಯರಾಗಬೇಕೆಂದು ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಬಹು ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ ಕರೆ ನೀಡಿರುತ್ತಾರೆ.

ವರದಿ: ಅಬ್ದುಸ್ಸಲಾಮ್ ಮದನಿ ಗುಂಡುಕಲ್ಲು...

Comments

Popular Posts