Skip to main content

Featured

ಕಾಸ್ಟಲ್ ಕರ್ನಾಟಕದ ಮುಸ್ಲಿಂ ಸಮುದಾಯದಲ್ಲಿನ ಆತ್ಮಹತ್ಯೆ: ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ದೃಷ್ಟಿಕೋನ

ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಒಂದು ತೀವ್ರ ಸಾರ್ವಜನಿಕ ಆರೋಗ್ಯದ ಸಮಸ್ಯೆಯಾಗಿಬಿಟ್ಟಿದೆ, ದೈನಂದಿನ ಘಟನಗಳನ್ನು ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ವರದಿ ಮಾಡಲಾಗುತ್ತಿದೆ. ಈ ಸಮಸ್ಯೆ ಬೇರೆ ಬೇರೆ ಸಮುದಾಯಗಳ  ಮೇಲೆ ಪರಿಣಾಮ ಬೀರುತ್ತಿದ್ದರೂ, ಮುಸ್ಲಿಂ ಸಮುದಾಯದ ಒಳಗಿನ ಪರಿಣಾಮವನ್ನು ಅರ್ಥಮಾಡಿಕೊಳ್ಳಲು, ಈ ಪ್ರದೇಶದ ವಿಶಿಷ್ಟ ಸಾಮಾಜಿಕ ವಿನ್ಯಾಸ, ಆರ್ಥಿಕ ಒತ್ತಡಗಳು ಮತ್ತು ಸಾಂಸ್ಕೃತಿಕ ಗುಣಲಕ್ಷಣಗಳನ್ನು ಪರಿಶೀಲಿಸಬೇಕು. ಲಭ್ಯವಿರುವ ವರದಿ  ಪ್ರಕಾರ ಆತ್ಮಹತ್ಯೆ ಡೇಟಾವನ್ನು ವಿಭಜಿಸುತ್ತಿಲ್ಲ, ಆದರೆ ವಿಸ್ತೃತ ಪ್ರದೇಶೀಯ ಪ್ರವೃತ್ತಿಗಳು ಅಡಗಿರುವ ಕಾರಣಗಳನ್ನು ಬೆಳಕಿಗೆಡಿಸುತ್ತವೆ. ಪ್ರದೇಶೀಯ ಸ್ಥಿತಿ: ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಮಾಣದ ಏರಿಕೆ ಕಾಸ್ಟಲ್ ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ, ಪ್ರತಿದಿನ ಹಲವು ಘಟನಗಳನ್ನು ಜಿಲ್ಲೆಗಳಾದ್ಯಂತ ವರದಿ ಮಾಡಲಾಗಿದೆ. ಈ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಹಣಕಾಸು ಚಿಂತೆ, ಕುಟುಂಬ ಕಲಹ, ಮಾನಸಿಕ ಆರೋಗ್ಯ ಹೋರಾಟಗಳು ಮತ್ತು ಸಾಮಾಜಿಕ ಕಲಹ ಎದುರಿಸುತ್ತಿರುವ ವ್ಯಕ್ತಿಗಳು ಸೇರಿದ್ದಾರೆ. ಹೆಚ್ಚಿನ ವಿವರಗಳಲ್ಲಿ ಧಾರ್ಮಿಕ ಗುರುತನ್ನು ಅಂದಾಜಿಸಲು ವರದಿಗಳು ನಿರ್ದೇಶಿಸುತ್ತಿಲ್ಲದಿದ್ದರೂ, ಈ ಪ್ರದೇಶದ ಮುಸ್ಲಿಂ ಕುಟುಂಬಗಳು ಒಂದು ಸಮಾನ ಸಾಮಾಜಿಕ-ಆರ್ಥಿಕ ಪರಿಸ್ಥಿತಿಯನ್ನು ಹಂಚಿಕೊಂಡಿವೆ—ಮೀನುಧಾನ್ಯ, ಚಿ...

SYS ಸಮ್ಮೇಳನ ವಿಜಯಗೊಳಿಸಿ.



ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ.........

ಕಳೆದ 30 ವರ್ಷಗಳಿಂದ ಕರುನಾಡ ಮಣ್ಣಿನಲ್ಲಿ ಅತ್ಯಂತ ಶಿಸ್ತು ಬದ್ಧ ಸಂಘಟನೆಯಾಗಿ ಉಲಮಾ ಉಮರಾ ಸಮೂಹವನ್ನು ಒಗ್ಗೂಡಿಸಿ ಇಸ್ಲಾಮಿನ ನೈಜ ತತ್ವಾದರ್ಶಗಳನ್ನು ಸಂರಕ್ಷಣೆ ಮಾಡುತ್ತಾ ಕಾರ್ಯಾಚರಿಸುವ ಮಾದರೀ ಸಂಘಟನೆಯಾಗಿದೆ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ರಿ).

ಶಿಕ್ಷಣ,ಸಾಂತ್ವನ,ಸಾಂಸ್ಕೃತಿಕ,ಸಾಮಾಜಿಕ,ಧಾರ್ಮಿಕ ಮುಂತಾದ ವಲಯಗಳಲ್ಲಿ ಶ್ಲಾಘನೀಯ ಸೇವೆಗಳನ್ನು ಮಾಡುತ್ತಾ ಜನಶ್ರದ್ಧೆಯನ್ನು ಪಡೆದು ಇದೀಗ ಮೂವತ್ತರ ಸಂಬ್ರಮದಲ್ಲಿದೆ SYS.

ಕಳೆದ ಒಂದು ವರ್ಷವನ್ನು ಮೂವತ್ತನೇ ವಾರ್ಷಿಕ ವರ್ಷವೆಂದು ಘೋಷಿಸಿ ವಿವಿಧ ಗಮನಾರ್ಹ ಕಾರ್ಯಕ್ರಮಗಳ ಮೂಲಕ ಆಚರಿಸಿ ಇದೀಗ ಜನವರಿ 24 ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಸಮಾರೋಪ ಮಹಾ ಸಮ್ಮೇಳನ ನಡೆಯಲಿದೆ.

ಕಳೆದ ಹಲವು ದಿನಗಳಿಂದ ಇದರ ರಾಜ್ಯಾಧ್ಯಕ್ಷ ಬಹು ಹಫೀಳ್ ಸಅದಿ, ಪ್ರಧಾನ ಕಾರ್ಯದರ್ಶಿ ಸಾದಿಖ್ ಮಾಸ್ಟರ್ ಮಲಬೆಟ್ಟು, ಕೊಶಾಧಿಕಾರಿ ಅಡ್ವೊಕೇಟ್ ಹಂಝತ್  ಹಾಗೂ ಸ್ವಾಗತ ಸಮಿತಿ ಚೇರ್ಮನ್ ಮುಂತಾಝಲಿ ಹಾಜಿ ಕನ್ವೀನರ್ ಶಕೀರ್ ಹಾಜಿ ಟ್ರಶರರ್ ಶಾಫಿ ಸಅದಿ ಮುಂತಾದವರ ನಾಯಕತ್ವದಲ್ಲಿ ಭರ್ಜರಿ ಸಿದ್ದತೆಗಳು ಬರದಿಂದ ನಡೆಯುತ್ತಿದೆ.

ಜಾಗತಿಕ ವಿದ್ವಾಂಸ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಾಯಕತ್ವದಲ್ಲಿ ನಡೆಯುವ ಪ್ರಸ್ತುತ ಐತಿಹಾಸಿಕ ಸಮ್ಮೇಳನದಲ್ಲಿ ಲಕ್ಷಾಂತರ ಜನ ಬಾಗವಹಿಸುವ ನಿರೀಕ್ಷೆಯಿದೆ.

ಎಲ್ಲಾ ಸಹೋದರರು ಪ್ರಸ್ತುತ ಸಮ್ಮೇಳನದಲ್ಲಿ ಬಾಗವಹಿಸಿ ಸಂಪೂರ್ಣ ಯಶಸ್ವಿಗೊಳಿಸಿ ದನ್ಯರಾಗಬೇಕೆಂದು ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಬಹು ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ ಕರೆ ನೀಡಿರುತ್ತಾರೆ.

ವರದಿ: ಅಬ್ದುಸ್ಸಲಾಮ್ ಮದನಿ ಗುಂಡುಕಲ್ಲು...

Comments

Popular Posts