MUSTHAFA HASAN ALQADRI OFFICIAL : 01/16/24

Translate

Tuesday, January 16, 2024

SYS ಸಮ್ಮೇಳನ ವಿಜಯಗೊಳಿಸಿ.



ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ.........

ಕಳೆದ 30 ವರ್ಷಗಳಿಂದ ಕರುನಾಡ ಮಣ್ಣಿನಲ್ಲಿ ಅತ್ಯಂತ ಶಿಸ್ತು ಬದ್ಧ ಸಂಘಟನೆಯಾಗಿ ಉಲಮಾ ಉಮರಾ ಸಮೂಹವನ್ನು ಒಗ್ಗೂಡಿಸಿ ಇಸ್ಲಾಮಿನ ನೈಜ ತತ್ವಾದರ್ಶಗಳನ್ನು ಸಂರಕ್ಷಣೆ ಮಾಡುತ್ತಾ ಕಾರ್ಯಾಚರಿಸುವ ಮಾದರೀ ಸಂಘಟನೆಯಾಗಿದೆ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ರಿ).

ಶಿಕ್ಷಣ,ಸಾಂತ್ವನ,ಸಾಂಸ್ಕೃತಿಕ,ಸಾಮಾಜಿಕ,ಧಾರ್ಮಿಕ ಮುಂತಾದ ವಲಯಗಳಲ್ಲಿ ಶ್ಲಾಘನೀಯ ಸೇವೆಗಳನ್ನು ಮಾಡುತ್ತಾ ಜನಶ್ರದ್ಧೆಯನ್ನು ಪಡೆದು ಇದೀಗ ಮೂವತ್ತರ ಸಂಬ್ರಮದಲ್ಲಿದೆ SYS.

ಕಳೆದ ಒಂದು ವರ್ಷವನ್ನು ಮೂವತ್ತನೇ ವಾರ್ಷಿಕ ವರ್ಷವೆಂದು ಘೋಷಿಸಿ ವಿವಿಧ ಗಮನಾರ್ಹ ಕಾರ್ಯಕ್ರಮಗಳ ಮೂಲಕ ಆಚರಿಸಿ ಇದೀಗ ಜನವರಿ 24 ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಸಮಾರೋಪ ಮಹಾ ಸಮ್ಮೇಳನ ನಡೆಯಲಿದೆ.

ಕಳೆದ ಹಲವು ದಿನಗಳಿಂದ ಇದರ ರಾಜ್ಯಾಧ್ಯಕ್ಷ ಬಹು ಹಫೀಳ್ ಸಅದಿ, ಪ್ರಧಾನ ಕಾರ್ಯದರ್ಶಿ ಸಾದಿಖ್ ಮಾಸ್ಟರ್ ಮಲಬೆಟ್ಟು, ಕೊಶಾಧಿಕಾರಿ ಅಡ್ವೊಕೇಟ್ ಹಂಝತ್  ಹಾಗೂ ಸ್ವಾಗತ ಸಮಿತಿ ಚೇರ್ಮನ್ ಮುಂತಾಝಲಿ ಹಾಜಿ ಕನ್ವೀನರ್ ಶಕೀರ್ ಹಾಜಿ ಟ್ರಶರರ್ ಶಾಫಿ ಸಅದಿ ಮುಂತಾದವರ ನಾಯಕತ್ವದಲ್ಲಿ ಭರ್ಜರಿ ಸಿದ್ದತೆಗಳು ಬರದಿಂದ ನಡೆಯುತ್ತಿದೆ.

ಜಾಗತಿಕ ವಿದ್ವಾಂಸ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಾಯಕತ್ವದಲ್ಲಿ ನಡೆಯುವ ಪ್ರಸ್ತುತ ಐತಿಹಾಸಿಕ ಸಮ್ಮೇಳನದಲ್ಲಿ ಲಕ್ಷಾಂತರ ಜನ ಬಾಗವಹಿಸುವ ನಿರೀಕ್ಷೆಯಿದೆ.

ಎಲ್ಲಾ ಸಹೋದರರು ಪ್ರಸ್ತುತ ಸಮ್ಮೇಳನದಲ್ಲಿ ಬಾಗವಹಿಸಿ ಸಂಪೂರ್ಣ ಯಶಸ್ವಿಗೊಳಿಸಿ ದನ್ಯರಾಗಬೇಕೆಂದು ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಬಹು ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ ಕರೆ ನೀಡಿರುತ್ತಾರೆ.

ವರದಿ: ಅಬ್ದುಸ್ಸಲಾಮ್ ಮದನಿ ಗುಂಡುಕಲ್ಲು...

ರಂಜಾನ್ ಪಾವನ ಮಾಸ

ರಂಜಾನ್ ಪಾವನ ಮಾಸ ನಮ್ಮಲ್ಲಿರುವ ಕೆಲವು ಕೆಟ್ಟ ಆಹಾರ ಪದ್ಧತಿಗಳನ್ನು ತೊಡೆದುಹಾಕಲು,ಹಾಗೂ ಜೊತೆಗೆ ವಿವಿಧ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಲು ಒಂದು ಅವಕಾಶವಾಗಿದೆ, ...